ಆತೂರು ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

 


ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಮಾ.23ರಂದು ಪ್ರತಿಷ್ಠಾ ಮಹೋತ್ಸವ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಪಂಚವಿಶಂತಿ ಕಲಶಾಭಿಷೇಕ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಶ್ರೀ ನಾಗದೇವರ ಸನ್ನಿದಿಯಲ್ಲಿ ಆಶ್ಲೇಷ ಬಲಿ, ಕಲಶಾಭಿಷೇಕ, ತಂಬಿಲ ಮತ್ತು ಶ್ರೀ ಸದಾಶಿವ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯದುಶ್ರೀ ಅನೆಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಬುಡಲೂರು, ಕಾರ್ಯದರ್ಶಿ ವಿನೋದ್ ಪಲ್ಲಡ್ಕ, ಉತ್ಸವ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here