ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಆಶಿಕ್ ಸುನೈಫ್ ಮೃತ್ಯು

0

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21ವ.)ಎಂಬವರು ಮಾ.24ರಂದು ಮೃತಪಟ್ಟಿದ್ದಾರೆ.

ಪುತ್ತೂರಿನ ಬಸ್ ಸ್ಟಾಂಡ್ ಬಳಿ ಇರುವ ಅಂಗಡಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಿಕ್ ಸುನೈಫ್‌ರವರು ತನ್ನ ಸ್ನೇಹಿತ ರವೂಫ್ ಜೊತೆ ಬೆಂಗಳೂರಿಗೆ ಪ್ರಯಾಣಿಸಿದ್ದರು. ಬೆಂಗಳೂರಿನ ರಾಮನಗರದ ಸಮೀಪದಲ್ಲಿ ಆಶಿಕ್ ಸುನೈಫ್‌ರವರ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿತ್ತು. ಅಪಘಾತದಿಂದ ಸುನೈಫ್ ಗಂಭೀರ ಗಾಯಗೊಡು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here