ಕೈವಲ್ಯ ಮಠಾಧೀಶ ಶ್ರೀ ಶಿವಾನಂದ ಸ್ವಾಮೀಜಿ‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

 


ಪುತ್ತೂರು: ಪುತ್ತೂರಿನಲ್ಲಿ ಕೈವಲ್ಯ ಮಠದ ಭೂಮಿ ಪೂಜೆಗೆ ಆಗಮಿಸಿದ ಕೈವಲ್ಯ ಮಠಾಧೀಶ ಶ್ರೀ ಶಿವಾನಂದ ಸ್ವಾಮೀಜಿ ಅವರು ಮಾ.25ರಂದು ಬೆಳಿಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರಾಮದಾಸ್ ಗೌಡ, ವೀಣಾ ಬಿ.ಕೆ, ಬಿ ಐತ್ತಪ್ಪ ನಾಯ್ಕ್, ವೇ ಮೂ ವೆಂಕಟೇಶ್ ಭಟ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕರೂ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವೇ ಮೂ ವಿ.ಎಸ್ ಭಟ್ ಅವರು ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ವೇ ಮೂ ವಸಂತ ಕೆದಿಲಾಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here