ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸುದೀರ್ಘ 8 ವರ್ಷಗಳ ಕಾಲ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಗ್ರಾಮದ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸಿದ್ದ ಯು.ಡಿ ಶೇಖರ್ ರವರು ನಿಧನರಾಗಿದ್ದು ಅವರಿಗೆ ಶ್ರದ್ಧಾಂಜಲಿ ಸಭೆಯು ನ.06 ರಂದು ಬೆಳಿಗ್ಗೆ 9.00,ಗಂಟೆಗೆ ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿದೆ.
ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಮತ್ತು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರು ತಿಳಿಸಿದ್ದಾರೆ.