ಕಲ್ಲೇಗ ದೈವಸ್ಥಾನದ ಬಳಿ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆಗೆ ಶಾಸಕರಿಗೆ ಮನವಿ

0

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನ ಆವರಣದ ಎದುರಿನ ಮಾಣಿ ಮೈಸೂರು ರಾಷ್ಡ್ರೀಯ ಹೆದ್ದಾರಿಯ ರಸ್ತೆ ಬದಿ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ನಿರ್ಮಾಣಕ್ಕಾಗಿ ಕಲ್ಲೇಗ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಯೋಗ ಶಾಸಕ ಸಂಜೀವ ಮಠಂದೂರು ಅವರಿಗೆ ಮನವಿ ಸಲ್ಲಿಸಿದೆ.

 

ಕಲ್ಲೇಗ ದೈವಸ್ಥಾನದ ಬಳಿ ಮಳೆಯ ಸಂದರ್ಭ ರಸ್ತೆ ಬದಿ ಚರಂಡಿಯ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ಮಳೆ ನೀರು ದೈವಸ್ಥಾನದ ಅಂಗಣಕ್ಕೆ ಬರುತ್ತಿದೆ. ಹಾಗಾಗಿ ಮಳೆ ನೀರಿನ ಕೃತಕ ನೆರೆಯನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಚರಂಡಿ ವ್ಯವಸ್ಥೆಗೆ ಅನುದಾನ ನೀಡುವಂತೆ ಅವರು ಮನವಿ ಮಾಡಿದ್ದಾರೆ. ನಿಯೋಗದಲ್ಲಿ ನಗರಸಭಾ ಅಧ್ಯಕ್ ಕೆ ಜೀವಂಧರ್ ಜೈನ್, ಕಲ್ಲೇಗ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಅಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ, ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾ ರಾಘವೇಂದ್ರ ಪ್ರಭು, ಮೀನಾಕ್ಷಿ ಡಿ ಗೌಡ, ರವಿಕಿರಣ್ ನೆಲಪ್ಪಾಲು, ಮಾದವ ಪಟ್ಲ, ಸುನಿತಾ ಶಿವನಗರ,ಪ್ರಸಾದ್ ಬೀಡಿಗೆ ಸೇರಿದಂತೆ ಸ್ಥಳೀಯರಾದ ಅಣ್ಣಿ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here