ಜಿ.ಎಲ್. ಸಮೂಹ ಸಂಸ್ಥೆಗಳ ಕೇಂದ್ರಿಯ ಆಡಳಿತ ಕಚೇರಿ ಉದ್ಘಾಟನೆ

0

ಪುತ್ತೂರು: ಸ್ವರ್ಣೋದ್ಯಮದಲ್ಲಿ 65 ವರ್ಷಗಳಿಂದ ಜನಮನ ಗೆದ್ದು, ಚಿನ್ನಾಭರಣ ಪ್ರಿಯರ ಮನೆಮಾತಾಗಿ ಕರಾವಳಿ, ಮಲೆನಾಡುಗಳಲ್ಲಿ ವಿಶಿಷ್ಟ ಛಾಪು ಮೂಡಿಸುವ ಮೂಲಕ ಪುತ್ತೂರು, ಹಾಸನ, ಕುಶಾಲನಗರ, ಸುಳ್ಯದಲ್ಲಿ ಸಂಸ್ಥೆಗಳನ್ನು ಹೊಂದಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ಸೇರಿದಂತೆ ಒಟ್ಟು ಜಿ.ಎಲ್. ಸಮೂಹ ಸಂಸ್ಥೆಗಳ ಕೇಂದ್ರಿಯ ಆಡಳಿತ ಕಚೇರಿ ಮಾ.27ರಂದು ಪುತ್ತೂರು ಜಿ.ಎಲ್. ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಂಡಿತು.

 


ಶಾಸಕ ಸಂಜೀವ ಮಠಂದೂರು ನೂತನ ಆಡಳಿತ ಕಚೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಪುತ್ತೂರು ಸಿಟಿ ಆಸ್ಪತ್ರೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಭಾಸ್ಕರ್ ಎಸ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿದರು. ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕ ಬಲರಾಮ್ ಆಚಾರ್ಯ, ಪತ್ನಿ ರಾಜಿ ಬಲರಾಮ ಆಚಾರ್ಯ, ಪುತ್ರರಾದ ಸುದನ್ವ ಆಚಾರ್ಯ, ಲಕ್ಷ್ಮೀಕಾಂತ್ ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ನಿವೃತ್ತ ಉಪನ್ಯಾಸಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here