ಶಿವಳ್ಳಿ ಸಂಪದ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ

0

 

ಪುತ್ತೂರು:ಶಿವಳ್ಳಿ ಸಂಪದ ಪುತ್ತೂರು ಇದರ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆಯು ಮಾ.26ರಂದು ಬೊಳುವಾರು ನವನೀತದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಮಹಿಳಾ ಸಾಧಕಿ ಜಯಲಕ್ಷ್ಮಿ ನಿಡ್ವಣ್ಣಾಯ ಕುಮಾರಮಂಗಲ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಶಿಕ್ಷಕಿ ಕವಿತಾ ಅಡೂರುರವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷೆ ವತ್ಸಲಾ ರಾಜ್ಞಿ ಮಹಿಳೆಯರಿಗೆ ಹಲವು ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಶಿವಳ್ಳಿ ಸಂಪದದ ಅಧ್ಯಕ್ಷ ದಿವಾಕರ ನಿಡ್ವಣ್ಣಾಯರು, ಕಾರ್ಯದರ್ಶಿ ಸತೀಶ್ ಕೆದಿಲಾಯ, ತಾಲೂಕು ಸಂಪರ್ಕಾಧಿಕಾರಿ ಲಕ್ಷ್ಮಿನಾರಾಯಣ ಕಡಂಬಳಿತ್ತಾಯರು, ಕಾರ್ಯಕ್ರಮಕ್ಕೆ ಶುಭ ಕೋರಿದರು. ತಾಲೂಕು ಪ್ರತಿನಿಧಿ ರೇವತಿ ಸಾಲ್ಮರ, ಜಯಲಕ್ಷ್ಮಿ ರಾವ್ ದಾಳಿಂಬ ಉಪಸ್ಥಿತರಿದ್ದರು. ಅಧ್ಯಕ್ಷೆ ಪ್ರೇಮಲತಾ ರಾವ್ ಕಾರ್ಯಕ್ರಮ ನಿರೂಪಿಸಿದರು. ಮಾಲತಿ ನಿಡ್ವಣ್ಣಾಯ ವಂದಿಸಿದರು.

 

 

ಸುದ್ದಿ ಜನಾಂದೋಲದ ಪ್ರತಿಜ್ಞಾ ಸ್ವೀಕಾರ:
ಲಂಚ, ಭ್ರಷ್ಠಾಚಾರದ ವಿರುದ್ಧ ಸುದ್ದಿ ಜನಾಂದೋಲನಕ್ಕೆ ಬೆಂಬಲ ಸೂಚಿಸಿ, ಕಾರ್ಯಕ್ರಮದಲ್ಲಿ ಫಲಕ ಸ್ವೀಕರಿಸಿ, ಪ್ರತಿಜ್ಞೆ ಸ್ವೀಕರಿಸಿದರು. ಸಂಘದ ಅಧ್ಯಕ್ಷೆ ಪ್ರೇಮಲತಾ ರಾವ್ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿದ್ದ ಗೌರವಾಧ್ಯಕ್ಷೆ ವತ್ಸಲಾ ರಾಜ್ಞಿ, ಶಿವಳ್ಳಿ ಸಂಪದದ ಅಧ್ಯಕ್ಷ ದಿವಾಕರ ನಿಡ್ವಣ್ಣಾಯರು, ಕಾರ್ಯದರ್ಶಿ ಸತೀಶ್ ಕೆದಿಲಾಯ ಹಾಗೂ ಸಭೆಯಲ್ಲಿದ್ದ ಮಹಿಳಾ ಸಂಪದದ ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

LEAVE A REPLY

Please enter your comment!
Please enter your name here