ರಾಮಕುಂಜ: ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲದಲ್ಲಿ ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿ ಸಂಚರಿಸುತ್ತಿದ್ದ ತಾಯಿ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಾ.೨೭ರಂದು ಮಧ್ಯಾಹ್ನ ನಡೆದಿದೆ.
ಆತೂರಿನಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲದಲ್ಲಿ ಹಾಲಿನ ಸೊಸೈಟಿಯ ಮುಂಭಾಗದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸುಣ್ಣಾಲ ನಿವಾಸಿ ನಂದಕಿಶೋರ್ ಹಾಗೂ ಬೈಕ್ನ ಸಹ ಸವಾರೆ ನಂದಕಿಶೋರ್ರವರ ತಾಯಿ ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.