ರಮೇಶ್ ಉಳಯರಿಗೆ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರಾಜ್ಯ ಶಿಕ್ಷಕ ಪ್ರಶಸ್ತಿ ಪ್ರದಾನ

0

ಪುತ್ತೂರು: ಬೆಳಗಾವಿಯ ನಾಡಿನ ಸಮಾಚಾರ ಪತ್ರಿಕೆಯ ವತಿಯಿಂದ ಕೊಡಮಾಡುವ ಡಾ|ಸರ್ವಪಲ್ಲಿ ರಾಧಾಕೃಷ್ಣನ್ ರಾಜ್ಯ ಶಿಕ್ಷಕ ಪ್ರಶಸ್ತಿಯನ್ನು ಪುತ್ತೂರಿನ ಸಾಹಿತಿ, ರಂಗಕರ್ಮಿ, ಸೃಜನಶೀಲ ಶಿಕ್ಷಕ ರಮೇಶ್ ಉಳಯರವರಿಗೆ ಬೆಳಗಾವಿ ಜಿಲ್ಲೆ ಕನ್ನಡ ಸಾಹಿತ್ಯ ಭವನದಲ್ಲಿ ಪ್ರಧಾನ ಮಾಡಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳ ನಾಲ್ಕು ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಕರ್ನಾಟಕ ಜಾನಪದ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯ ಡಾ. ಸಿ.ಕೆ. ಸಾವಲಗಿ ಪ್ರಶಸ್ತಿ ಪುರಸ್ಕೃತರಿಗೆ ಶಾಲುಹೊದಿಸಿ, ಮೈಸೂರು ಪೇಟ ತೊಡಿಸಿ ಹಾರ ಹಾಕಿ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಿದರು.

 

ಅರಬಾವಿ ಮತಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿರವರ ಆಪ್ತ ಕಾರ್ಯದರ್ಶಿ ಭೀಮಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಿ.ಕೆ. ಸಾವಲಗಿರವರು ಅಭಿನಂದನಾ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷ ದಿಲೀಪ್ ಕುರಂದವಾಡ, ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ, ಬೆಳಗಾವಿ ರಾಷ್ಟ್ರಕೂಟ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಗೋಕಾಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಭಾರತಿ ಮದಬಾವಿ, ಡಿ.ಎಂ.ಎನ್ ರಾಜ್ಯ ಸಂಘಟನಾ ಸಂಚಾಲಕ ಸತ್ಯಪ್ಪ ಕರವಾಡಿ, ದಿನ ಬೆಳಗಾವಿ ಜಿಲ್ಲಾ ಸಂಚಾಲಕ ರಮೇಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಶೃತಿ ನಿಗಡೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here