ಪುತ್ತೂರು:ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರದಲ್ಲಿ ಶಿಕ್ಷಕ ದಂಪತಿ ಮನೆಯಿಂದ ಲಕ್ಷಾಂತರ ರೂ.ಬೆಲೆ ಬಾಳುವ ಚಿನ್ನಾಭರಣ ಕಳವಾದ ಘಟನೆ ಮಾ.26ರಂದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶೋಭಾ ಮತ್ತು ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಮೇಶ್ ಹೆಚ್.ಕೆ. ಅವರ ಬಾಡಿಗೆ ಮನೆಯಿಂದ ಚಿನ್ನಾಭರಣ ಕಳವಾಗಿರುವುದು ಮಾ.26ಕ್ಕೆ ಬೆಳಕಿಗೆ ಬಂದಿದೆ. ತಮ್ಮ ಮಗಳ ಹುಟ್ಟುಹಬ್ಬದ ಸಲುವಾಗಿ ತಂದು ಮನೆಯ ರೂಮಿನ ಗೋದ್ರೇಜ್ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ಮಾ.26ರಂದು ರಾತ್ರಿ ಪರಿಶೀಲಿಸಿದಾಗ ಚಿನ್ನಾಭರಣ ಕಳವಾಗಿರುವುದು ಬೆಳಕಿಗೆ ಬಂದಿದೆ.ಮಾ.23ರಿಂದ ಮಾ.26ರ ಮಧ್ಯೆ ಈ ಕಳವು ಪ್ರಕರಣ ನಡೆದಿದೆ.ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ.11,88,000 ಆಗಿದ್ದು, ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.