ನೆಲ್ಯಾಡಿ: ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆ ಪರಿಗಣಿಸಿ ನೆಲ್ಯಾಡಿ ಸೀನಿಯರ್ ಛೇಂಬರ್ಗೆ ಮಾ.26ರಂದು ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ನ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
OUT STANDING PRESIDENT AWARD OF EXCELLENCE APPRECIATIONS FOR CONDUCTING NATIONAL PRESIDENT’S FLAGSHIP PROGRAMME JALADHARA 21-22, NATIONAL PRESIDENTS RECOGNITION FOR PROGRAMMES CONDUCTED NATIONAL DIRECTOR,S RECOGNITION FOR DUES WITH GROWTH REPORT ON TIME ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನೆಲ್ಯಾಡಿ ಲೀಜನ್ ಅಧ್ಯಕ್ಷ ಡಾ.ಸದಾನಂದ ಕುಂದರ್ರವರಿಗೆ ರಾಷ್ಟ್ರೀಯ ಅಧ್ಯಕ್ಷ ಡಾ. ಕೇದಿಗೆ ಅರವಿಂದ ರಾವ್ರವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್ನ ಸ್ಥಾಪಕಾಧ್ಯಕ್ಷ ಅಬ್ರಹಾಂ ವರ್ಗೀಸ್, ಉಪಾಧ್ಯಕ್ಷ ಉಲಹನ್ನನ್, ಕಾರ್ಯದರ್ಶಿ ಪ್ರಶಾಂತ್ ಸಿ.ಹೆಚ್., ಸೀನಿಯರ್ ಚೇಂಬರ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್, ನಿರ್ದೇಶಕ ರಾಜೇಶ್ ವೈಭವ್ರವರು ಉಪಸ್ಥಿತರಿದ್ದರು.