ಪುತ್ತೂರು: ಕುಡಿಪ್ಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಮಾ.29ರಂದು ನಡೆದ ಸಂಜೀವಿನಿ ಒಕ್ಕೂಟದ ಮಹಿಳಾ ದಿನಾಚರಣೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ, ಸುದ್ದಿ ಜನಾಂದೋಲನ ವೇದಿಕೆಯಿಂದ ನಡೆಯುತ್ತಿರುವ ಜನಾಂದೋಲನ ಬೆಂಬಲಿಸಿ ಫಲಕ ಪಡೆದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಂಜೀವಿನಿ ಒಕ್ಕೂಟದ ಎಂಬಿಕೆ ಭವ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ ಹೆಗಡೆ, ಸಂಜೀವಿನಿ ಒಕ್ಕೂಟದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್, ಸಂಪನ್ಮೂಲ ವ್ಯಕ್ತಿಯಾಗಿದ್ದ ಕುಡಿಪ್ಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಶೋಭಾ ಮಯ್ಯ, ಕುಡಿಪ್ಪಾಡಿ ಗ್ರಾ.ಪಂ ಅಧ್ಯಕ್ಷೆ ರೇಖಾ ಬಟ್ರುಪ್ಪಾಡಿ, ಉಪಾಧ್ಯಕ್ಷೆ ಸುಮಿತ್ರ, ಸದಸ್ಯರಾದ ಗಿರಿಧರ ಗೋಮುಖ, ಸ್ಮಿತಾ ಹಣಿಯೂರು, ಕಾರ್ಯದರ್ಶಿ ಭವಾನಿ, ಚಂದ್ರಾವತಿ, ಕುಡಿಪ್ಪಾಡಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಗೀತಾ, ಕಿರಿಯ ಆರೋಗ್ಯ ಸಹಾಯಕಿ ತೇಜಾಕ್ಷಿ, ಸಂಜೀವಿನಿ ಒಕ್ಕೂಟದ ಎಲ್ಸಿಆರ್ಪಿಗಳಾದ ಕವಿತಾ, ಲೀಲಾವತಿ ಹಾಗೂ ಒಕ್ಕೂಟದ ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.