ಪುತ್ತೂರು: ತಾಲೂಕು ಬಂಟರ ಸಂಘದಿಂದ ಮಾ. 27 ರಂದು ನಿಧನರಾದ ನಿವೃತ್ತ ತಹಶೀಲ್ದಾರ್ ಸಿ.ಎಚ್.ಕೋಚಣ್ಣ ರೈ ಚಿಲ್ಮೆತ್ತಾರುರವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಮಾ. 29 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು.
ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಜಗಜೀವನ್ದಾಸ್ ರೈ ಚಿಲ್ಮೆತ್ತಾರು ಮತ್ತು ಒಳಮೊಗರು ಗ್ರಾಮ ಬಂಟರ ಸಂಘದ ಅಧ್ಯಕ್ಷ ನಾರಾಯಣ ರೈ ಪರ್ಪುಂಜ ಬಾರಿಕೆರವರು ನುಡಿನಮನ ಸಲ್ಲಿಸಿದರು.
ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ನಿರ್ದೇಶಕ ಎನ್.ಚಂದ್ರಹಾಸ್ ಶೆಟ್ಟಿ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ಬಂಟರ ಸಂಘದ ಉಪಾಧ್ಯಕ್ಷ ರೋಶನ್ ರೈ ಬನ್ನೂರು, ಮಾಜಿ ಕೋಶಾಧಿಕಾರಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಬಂಟರ ಸಂಘದ ಪದಾಧಿಕಾರಿಗಳಾದ ಶಶಿಕಿರಣ್ ರೈ ನೂಜಿಬೈಲು, ಎ.ಕೆ.ಜಯರಾಮ ರೈ ಕೆಯ್ಯೂರು, ದೇರಣ ರೈ ಪಾಪನಡ್ಕ, ಜಯಪ್ರಕಾಶ್ ರೈ ಚೆಲ್ಯಡ್ಕ, ಸದಾಶಿವ ರೈ ಸೂರಂಬೈಲು, ಸಂತೋಷ್ ಶೆಟ್ಟಿ ಸಾಜ, ಸ್ವರ್ಣಾಲತಾ ಜೆ. ರೈ, ಅಶೋಕ್ ಕುಮಾರ್ ರೈ ನೆಕ್ಕರೆ, ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಸೀತಾರಾಮ ರೈ ಕೆದೆಂಬಾಡಿಗುತ್ತು, ಸುರೇಶ್ ರೈ ಸೂಡಿಮುಳ್ಳು, ಭರತ್ ರೈ ಪಾಲ್ತಾಡಿ, ರವಿಚಂದ್ರ ರೈ ಕುಂಬ್ರ ಹಾಗೂ ಭಾಸ್ಕರ್ ರೈರವರುಗಳು ಉಪಸ್ಥಿತರಿದ್ದರು.