ಉಪ್ಪಿನಂಗಡಿ: ಹಿಜಾಬ್ ಕಾರಣಕ್ಕೆ ಸುದ್ದಿಯಾಗಿದ್ದ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರದಂದು ಪ್ರಾರಂಭಗೊಂಡ ಪ್ರಥಮ ಪಿಯುಸಿ ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ನಡೆಯಿತು. ಮಂಗಳವಾರ ನಡೆದ ಇಕಾನಾಮಿಕ್ಸ್ ಮತ್ತು ಕೆಮಿಸ್ಟ್ರೀ ವಿಷಯದ ಪರೀಕ್ಷೆಗೆ ಹಾಜರಾಗಬೇಕಾಗಿದ್ದ 601 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಹಾಜರಾದ ಎಲ್ಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಮವಸ್ತ್ರ ನಿಯಮ ಪಾಲಿಸಿ ತರಗತಿ ಪ್ರವೇಶಿಸಿದ್ದಾರೆ.