ಮಾ. 31 ಸೇವಾ ನಿವೃತ್ತಿ ಎಸ್‌ಕೆಜಿಐ ಬ್ಯಾಂಕ್ ಹಿರಿಯ ಶಾಖಾ ವ್ಯವಸ್ಥಾಪಕ ಜಗದೀಶ್ ಎಸ್.ಎನ್.

0

ಪುತ್ತೂರು: ಎಸ್‌ಕೆಜಿಐ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಪುತ್ತೂರು ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಜಗದೀಶ್ ಎಸ್.ಎನ್. ಅವರು ಮಾ. 31ರಂದು ನಿವೃತ್ತಿ ಹೊಂದಲಿದ್ದಾರೆ. 1984ರಲ್ಲಿ ಎಸ್‌ಕೆಜಿಐಗೆ ಸೇರಿದ್ದು, ಬಳಿಕ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. 2022ರಲ್ಲಿ ಹಿರಿಯ ಶಾಖಾ ವ್ಯವಸ್ಥಾಪಕರಾಗಿ ಭಡ್ತಿಗೊಂಡಿದ್ದರು. ಇವರು ಪುತ್ತೂರು ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರಾಗಿ, ರೋಟರಿ ಜಿಲ್ಲೆ ವಲಯ ಪ್ರತಿನಿಧಿಯಾಗಿ ಅತ್ಯುತ್ತಮ ವಲಯ ಪ್ರತಿನಿಧಿ ಪ್ರಶಸ್ತಿಗೆ ಪಾತ್ರರಾಗಿದ್ದರು. ಪುತ್ತೂರು ಬೊಳುವಾರು ವಿಶ್ವಕರ್ಮ ಯುವ ಸಮಾಜದ ದಶಮಾನೋತ್ಸವ ವರ್ಷದ ಅಧ್ಯಕ್ಷರಾಗಿದ್ದು, ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರಾಗಿದ್ದಾರೆ. ಅಲ್ಲದೇ, ವಿಶ್ವಕರ್ಮ ಮಹಿಳಾ ಮಂಡಳಿಯ ಸಲಹಾ ಸಮಿತಿ ಸದಸ್ಯರೂ ಆಗಿದ್ದಾರೆ. ಮಂಗಳೂರಿನ ರಥಬೀದಿ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪುತ್ತೂರು ವಲಯ ಸಂಚಾಲಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಪತ್ನಿ ಉಷಾ, ಪುತ್ರ ಸಂಜನ್ ಜೊತೆ ಪರ್ಪುಂಜದಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here