ಏ.2: ಯುಗಾದಿ ಪ್ರಯುಕ್ತ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮ: ಪುತ್ತೂರು ಪೇಟೆಯಲ್ಲಿ ಜಾತ್ರ ಆಮಂತ್ರಣ ಪತ್ರ ವಿತರಣೆ

0

ಪುತ್ತೂರು : ಏ.2 ರಂದು ಯುಗಾದಿ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪಂಚಾಂಗ ಶ್ರವಣ ಕಾರ್ಯಕ್ರಮವು ಪೂರ್ವಾಹ್ನ ಗಂಟೆ 8ಕ್ಕೆ ವಿನಾಯಕ ಭಟ್ ಗಾಳಿಮನೆ ಅವರಿಂದ ನಡೆಯಲಿದೆ. ಬಳಿಕ ವಾರ್ಷಿಕ ಜಾತ್ರೆಯ ಆಮಂತ್ರಣ ವನ್ನು ಪುತ್ತೂರು ಪೇಟೆಯಲ್ಲಿ ವಿತರಣೆ ಮಾಡಲಾಗುವುದು.

ಬೆಳಿಗ್ಗೆ ಗಂಟೆ 9 ರಿಂದ ದರ್ಬೆ ವೃತ್ತದಿಂದ ಬೊಳುವಾರು ಓಂ ಶ್ರೀ ಶಕ್ತಿ ಆಂಜನೆಯ ಮಂತ್ರಾಲಯದ ತನಕ ದೇವಳದ ಜಾತ್ರ ಮಹೋತ್ಸವದ ಆಮಂತ್ರಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಹಾಗು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರು ಚಾಲನೆ ನೀಡಲಿದ್ದಾರೆ. ಎಲ್ಲಾ ಭಕ್ತವೃಂದ್ಧದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹಾಗೂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿಯವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here