ಪುತ್ತೂರು ತಾಲೂಕು ಬಂಟರ ಸಂಘದ ಕಾರ‍್ಯಕಾರಿ ಸಮಿತಿ ಸಭೆ

0

ಚಿತ್ರ- ಉಮಾಪ್ರಸಾದ್ ರೈ ನಡುಬೈಲು

ಬಂಟ್ರೇ ಗೌಜಿ ಕಾರ‍್ಯಕ್ರಮ ಮುನ್ನಾ ಎಲ್ಲಾ ವಲಯಗಳಲ್ಲಿ ಬಂಟರ ಸಮಾವೇಶ-ಬಾಲ್ಯೊಟ್ಟು

ಪುತ್ತೂರು: ಪುತ್ತೂರು ತಾಲೂಕು ಬಂಟರ ಸಂಘದ ಕಾರ‍್ಯಕಾರ ಸಮಿತಿ ಸಭೆಯು ಮಾ. ೨೯ ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಎ. 3೦ ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ವಠಾರದಲ್ಲಿ ಬಂಟ್ರೇ ಗೌಜಿ ಕಾರ‍್ಯಕ್ರಮ ನಡೆಯಲಿದೆ. ಅದಕ್ಕಿಂತ ಮುನ್ನಾ ಎಲ್ಲಾ ವಲಯಗಳಲ್ಲಿ ಬಂಟರ ಸಮಾವೇಶ ನಡೆಯಲಿದ್ದು, ವಲಯ ವ್ಯಾಪ್ತಿಯಲ್ಲಿ ನಡೆಯುವ ಸಮಾವೇಶದಲ್ಲಿ ಎಲ್ಲಾ ಬಂಟ ಸಮಾಜದ ಭಾಂದವರು ಭಾಗವಹಿಸಬೇಕು ಎಂದು ಹೇಳಿದರು.
ತಾಲೂಕು ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ತಾಲೂಕು ಬಂಟರ ಸಂಘದ ಉಪಾಧ್ಯಕ್ಷರುಗಳಾದ ಜಗಜೀವನ್‌ದಾಸ್ ರೈ ಚಿಲ್ಮೆತ್ತಾರು, ರೋಶನ್ ರೈ ಬನ್ನೂರು, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ನಿರ್ದೇಶಕ ಎನ್. ಚಂದ್ರಹಾಸ್ ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳಾದ ನಾರಾಯಣ ರೈ ಪರ್ಪುಂಜ ಬಾರಿಕೆ, ನಿತ್ಯಾನಂದ ಶೆಟ್ಟಿ ಮನವಳಿಕೆ, ಎ.ಕೆ.ಜಯರಾಮ ರೈ ಕೆಯ್ಯೂರು, ಶಶಿಕಿರಣ್ ರೈ ನೂಜಿಬೈಲು, ದೇರಣ್ಣ ರೈ ಪಾಪನಡ್ಕ. ಜಯಪ್ರಕಾಶ್ ರೈ ಚೆಲ್ಯಡ್ಕ, ಸದಾಶಿವ ರೈ ಸೂರಂಬೈಲು, ಸಂತೋಷ್ ಶೆಟ್ಟಿ ಸಾಜ, ಸ್ವರ್ಣಲತಾ ಜೆ.ರೈ, ಅಶೋಕ್ ಕುಮಾರ್ ರೈ ನೆಕ್ಕರೆ, ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಸೀತಾರಾಮ ರೈ ಕೆದಂಬಾಡಿಗುತ್ತು, ಸುರೇಶ್ ರೈ ಸೂಡಿಮುಳ್ಳು, ಭರತ್ ರೈ ಪಾಲ್ತಾಡಿ, ಬಂಟರ ಭವನದ ರವಿಚಂದ್ರ ರೈ ಮತ್ತು ಭಾಸ್ಕರ್ ರೈರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here