ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ವತಿಯಿಂದ ಪ್ರಕಾಶ್ ರಾವ್ ಕೊಡ್ಲಾರುರವರ ನೇತ್ರತ್ವದಲ್ಲಿ ಎ. 2 ರಂದು ಸಂಜೆ 6 ರಿಂದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿರವರು ಧಾರ್ಮಿಕ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಉಳ್ಳಾಲ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ಪ್ರಕಟನೆ ತಿಳಿಸಿದೆ.