ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಪಾಪೆಮಜಲು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಶಾಲಾ ಮಖ್ಯಗುರು ಮೋನಪ್ಪ ಪೂಜಾರಿಯವರು ಸಭಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ತಿಲಕ್ ರೈ ಕುತ್ಯಾಡಿ ಹಾಗೂ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಶೀತಲ್ ಕುಮಾರ್ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿ ಪವಿತ್ರ ಉಡುಪರವರು, ವಿದ್ಯಾರ್ಥಿಗಳಿಗೆ ಆರೋಗ್ಯ ಹಾಗೂ ವಯಕ್ತಿಕ ಸುಚಿತ್ವದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾಲೇಜಿನ ಸಮಾಜಕಾರ್ಯ ವಿಭಾಗದ ಪ್ರತಿನಿಧಿ ಸಿತಾರ ಶೆರಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ಶ್ರೀಕಾಂತ.ಟಿ.ಕೆ ಕಾರ್ಯಕ್ರಮ ನಿರೂಪಿಸಿದರು. ಸಿತಾರ ಶೆರಿನ್ ಸ್ವಾಗತಿಸಿ, ರಶ್ಮಿತಾ ರೈ ವಂದಿಸಿದರು.