ಎ 2- ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯ ದೇವರ ಸಾನಿಧ್ಯದಲ್ಲಿ ಭೂಪರಿಗ್ರಹ

0

      ಕಾಣಿಯೂರು: ಬೆಳಂದೂರು ಗ್ರಾಮದ ಅಜಿರಂಗಳ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಭೂಪರಿಗ್ರಹ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ತಂತ್ರಿಯವರ ನೇತೃತ್ವದಲ್ಲಿ ಎ. 2 ಮತ್ತು ಎ. 3ರಂದು ನಡೆಯಲಿದೆ. ಕಾರ್ಯಕ್ರಮದ ಪ್ರಯುಕ್ತ ಎ. 2ರಂದು ಸಂಜೆ ಕುಣಿತ ಭಜನಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

ದೇವಸ್ಥಾನದ ಗರ್ಭಗುಡಿಯ ನಿರ್ಮಾಣವಾಗಲಿರುವ ಸ್ಥಳದಲ್ಲಿ ಎ 2ರಂದು ರಾತ್ರಿ 11.30 ಗಂಟೆಗೆ ಎತ್ತುಗಳಿಂದ ಉಳುಮೆ ಮಾಡಿ ಎ 3ರಂದು 5.30 ರ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here