ಪ್ರಗತಿ ಸ್ಟಡಿಸೆಂಟರ್‌ನಲ್ಲಿ Advanced  Learning  ಬೇಸಿಗೆ ಶಿಬಿರ ಉದ್ಘಾಟನೆ

0

ಪುತ್ತೂರು : ಇಲ್ಲಿನ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ Advanced  Learning  ಬೇಸಿಗೆ ಶಿಬಿರ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಸಂಜಯನಗರ ಶಾಲಾ ಪ್ರಭಾರ ಮುಖ್ಯಗುರು ರಮೇಶ್ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ಒಳ್ಳೆಯ ವಿಚಾರಗಳನ್ನು ತುಂಬುವ ಕೆಲಸವಾಗಬೇಕು. ಅದಕ್ಕೆ ಇಂತಹ ಶಿಬಿರಗಳು ತುಂಬಾ ಮುಖ್ಯ ಎಂದು ತಿಳಿಸಿದರು. ಮೌನೇಶ್ ವಿಶ್ವಕರ್ಮ ಮಾತಾನಾಡಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸಿನತ್ತಾ ಸಾಗಲು ಶಿಬಿರಗಳು ಅವಶ್ಯಕವೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಪಿ.ವಿ.ಗೋಕುಲ್‌ನಾಥ್ ಮಾತನಾಡಿ ಪ್ರಗತಿಯು ಬೆಳೆದು ಬಂದ ರೀತಿ ಹಾಗೂ ಹಮ್ಮಿಕೊಂಡ ಶಿಬಿರದ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಹೇಮಲತಾಗೋಕುಲ್ ಮಾತನಾಡಿ ಮುಖ್ಯವಾಗಿ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಂಡಿದ್ದು ಈ ಶಿಬಿರದ ಸದುಪಯೋಗವನ್ನು ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು. ಶಿಬಿರಾರ್ಥಿಗಳು, ಸಂಸ್ಥೆಯ ವಿದ್ಯಾರ್ಥಿಗಳು ಉಪನ್ಯಾಸಕರು ಉಪಸ್ಥಿತರಿದ್ದರು. ದೀಕ್ಷಾ ಮತ್ತು ಸಂಗೀತ ಪ್ರಾರ್ಥಿಸಿದರು. ಉಪನ್ಯಾಸಕಿ ರಕ್ಷಾ ಸ್ವಾಗತಿಸಿದರು. ಉಪನ್ಯಾಸಕಿ ಸಂಹಿತಾ ವಂದಿಸಿದರು. ಉಪನ್ಯಾಸಕಿ ಪ್ರಮೀಳ ಎನ್.ಡಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here