ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು; ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ. 8 ಮತ್ತು 9 ರಂದು ನಡೆಯಲಿರುವ ಜಾತ್ರೋತ್ಸವಕ್ಕೆ ಎ. 1 ರಂದು ಗೊನೆ ಮುಹೂರ್ತ ನೆರವೇರಿತು.

ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಗೌರವ ಸಲಹೆಗಾರ ಜಯರಾಮ ಕೆದಿಲಾಯ, ಅಧ್ಯಕ್ಷ ಲಕ್ಷ್ಮೀಶ ತಂತ್ರಿ ಉಪ್ಪಳ, ಉಪಾಧ್ಯಕ್ಷ ಕೆ.ಯಂ ಬೆಳಿಯಪ್ಪ ಗೌಡ ಕೆದ್ಕಾರ್, ಕಾರ್ಯದರ್ಶಿ ಯಂ. ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ಎಸ್.ನವೀನ್ ಕುಮಾರ್, ಸದಸ್ಯರಾದ ಸುಜಯ್ ತಂತ್ರಿ ಉಪ್ಪಳ, ಪ್ರಸನ್ನ ಭಟ್ ಪಂಚವಟಿ, ಕೆ.ಗಿರೀಶ್ ರೈ, ಯಂ.ರವಿ ಮಣಿಯ, ಯಂ.ಸುಧೀರ್ ಹೆಬ್ಬಾರ್ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಮೋನಪ್ಪ ಪುರುಷ ಮುಗೇರಡ್ಕ, ಗಣೇಶ ಭಟ್ ಮಜಲುಮಾರು, ಗಣೇಶ್ ಶೆಟ್ಟಿ ಶಿಬರ ಅರ್ಚಕ ಪ್ರಸಾದ್ ಅಡಿಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here