ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಜೇಶ್ ನಿಧನ

0

ಪುತ್ತೂರು: ಕೆಲ ದಿನಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ರಾಜೇಶ್ ನಾಯ್ಕ್ (24ವ.) ರವರು ಎ.1 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ರಾಜೇಶ್ ನಾಯ್ಕ್‌ರವರು ದರ್ಬೆ ಬೈಪಾಸ್‌ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here