ಮುಕ್ರಂಪಾಡಿಯಲ್ಲಿ ಬೈಕ್‌ಗಳೆರಡರ ನಡುವೆ ಡಿಕ್ಕಿ ಮೂವರಿಗೆ ಗಾಯ-ಓರ್ವ ಮಂಗಳೂರು ಆಸ್ಪತ್ರೆಗೆ

0

ಪುತ್ತೂರು: ಮುಕ್ರಂಪಾಡಿ ಸಮೀಪ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಸುಳ್ಯ ಕಡೆ ಹೋಗುತ್ತಿದ್ದ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಸುರತ್ಕಲ್ ನಿವಾಸಿ ಅಭಿರಾಮ್ ಎಂಬವರು ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಮತ್ತು ರಾಜೇಶ್ ಎಂಬವರು ಸುಳ್ಯ ಕಡೆಗೆ ಚಲಾಯಿಸುತ್ತಿದ್ದ ಬೈಕ್ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ರಾಜೇಶ್ ಅವರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಅಭಿರಾಮ್ ಮತ್ತು ಸಹಸವಾರ ನಿತಿನ್ ಅವರು ಗಾಯಗೊಂಡಿದ್ದು ಪುತ್ತೂರು ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here