ಮಂಗಳೂರು : ದ.ಕ.ಜಿಲ್ಲಾ ಪಂಚಾಯತ್ ಆಡಳಿತ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಯು.ಅರ್. ಶೆಟ್ಟಿ(ಉದಯ ರವಿ)ಯವರಿಗೆ ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘ ಹಾಗೂ ನಾಡಿನ ಸಮಾಚಾರ ದಿನ ಪತ್ರಿಕೆ ಬಳಗದ ಸಂಯುಕ್ತ ಆಶ್ರಯದಲ್ಲಿ ವಿಶಿಷ್ಠ ಕಲಾ ಸೇವೆಗಾಗಿ ರಾಜ್ಯ ಮಟ್ಟದ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯು.ಅರ್. ಶೆಟ್ಟಿಯವರು ದ.ಕ. ಜಿಲ್ಲಾ ಪಂಚಾಯತ್ ಉದ್ಯೋಗಿಯಾಗಿದ್ದು ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಲಾ ಮತ್ತು ಸಾಂಸ್ಕೃತಿಕ ಸಂಘದ ದ.ಕ. ಜಿಲ್ಲಾಧ್ಯಕ್ಷರಾಗಿದ್ದು ಸರಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಜನ ಜಾಗೃತಿ ಮೂಡಿಸಲು ಬೀದಿ ನಾಟಕಗಳೂ ಸೇರಿದಂತೆ ಅನೇಕ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಯು.ಅರ್. ಶೆಟ್ಟಿಯವರು ಮೂಲತಃ ಪುತ್ತೂರಿನ ಪಡುಮಲೆಯವರು