ಮಾ.5: ಈಶ್ವರಮಂಗಲದಲ್ಲಿ ಕೆವಿಜಿ ದಂತ ಮಹಾವಿದ್ಯಾಲಯ ದಂತ ಆರೋಗ್ಯ ಉಪಕೇಂದ್ರ ಉದ್ಘಾಟನೆ

0

ಪುತ್ತೂರು:ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಈಶ್ವರಮಂಗಲದ ಹೀರಾ ಕಾಂಪ್ಲೆಕ್ಸ್‌ನಲ್ಲಿ ಪ್ರಾರಂಭಿಸಲಾಗಿರುವ ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ದಂತ ಆರೋಗ್ಯ ಉಪಕೇಂದ್ರವು ಎ.೫ರಂದು ಉದ್ಘಾಟನೆಗೊಳ್ಳಲಿದೆ.

 

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ|ಅಂಜನಪ್ಪ ಟಿ.ಹೆಚ್ ಉಪಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ, ಸುಳ್ಯ ಎಓಎಲ್‌ಇ ಇದರ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ|ರೇಣುಕಾಪ್ರಸಾದ್ ಕೆ.ವಿ. ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಎಓಎಲ್‌ಇ ಇದರ ನಿರ್ದೇಶಕಿ ಡಾ.ಜ್ಯೋತಿ ಆರ್.ಪ್ರಸಾದ್, ಕೆವಿಜಿ ದಂತ ಮಹಾವಿದ್ಯಾಲಯ ಆಡಳಿತ ಮಂಡಳಿ ಸದಸ್ಯರಾದ ಎನ್.ಎ. ರಾಮಚಂದ್ರ, ಜಾಕೆ ಮಾಧವ ಗೌಡ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧ್ಯಕ್ಷ ಆರ್.ರಮೇಶ್ ರೈ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಿಖಿಲ್, ಹೀರಾ ಕಾಂಪ್ಲೆಕ್ಸ್ ಮ್ಹಾಲಕ ಅಬ್ದುಲ್ ಖಾದರ್ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಹಾಗೂ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here