ಡಾ.ಕಲ್ಲಡ್ಕ ಪ್ರಭಾಕರ ಭಟ್
ಪುತ್ತೂರುರ್ಎಸ್ಎಸ್ನ ಹಿರಿಯ ಮುಖಂಡರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ದಿಢೀರ್ ಲೋ ಬಿಪಿಯಿಂದಾಗಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏ.೫ರ ಸಂಜೆ ಮನೆಯಲ್ಲಿದ್ದ ವೇಳೆ ಅವರು ದಿಢೀರ್ ಅಸ್ವಸ್ಥರಾದರು.ಕೂಡಲೇ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಅಲ್ಲಿ ಪರೀಕ್ಷಿಸಿದ ವೈದ್ಯರು ಲೋ ಬಿಪಿಯಿಂದಾಗಿ ಈ ರೀತಿಯಾಗಿರುವುದಾಗಿ ತಿಳಿಸಿದ್ದು, ಡಾ.ಭಟ್ ಅವರು ಇದೀಗ ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.