ನೆಲ್ಯಾಡಿ ಶಾಲೆಯಲ್ಲಿ ವಾಲಿಬಾಲ್ ತರಬೇತಿ ಶಿಬಿರ

0

  • ವಾಲಿಬಾಲ್ ತಂಡಕ್ಕೆ ಪೂರ್ವವಿದ್ಯಾರ್ಥಿ ಸಂಘದಿಂದ ಸಹಕಾರ: ಜಯಾನಂದ ಬಂಟ್ರಿಯಾಲ್

 

ನೆಲ್ಯಾಡಿ: ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಹಮ್ಮಿಕೊಂಡ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ಪಂದ್ಯಾಟದ ತರಬೇತಿ ನೀಡಲಾಯಿತು.

ನೆಲ್ಯಾಡಿ ಗ್ರಾ.ಪಂ.ಸದಸ್ಯರೂ, ಶಾಲಾ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಆದ ಜಯಾನಂದ ಬಂಟ್ರಿಯಾಲ್‌ರವರು ಶಿಬಿರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬೇಸಿಗೆ ತರಬೇತಿ ಶಿಬಿರವು ಮಕ್ಕಳಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗುತ್ತದೆ. ಇಲ್ಲಿ ತರಬೇತು ಪಡೆದುಕೊಂಡ ವಿದ್ಯಾರ್ಥಿಗಳು ಮುಂದೆ ಉತ್ತಮ ಆಟಗಾರರಾಗಿ ಹೊರ ಹೊಮ್ಮಬೇಕು. ಇಲ್ಲಿನ ಶಾಲಾ ಬಾಲಕ, ಬಾಲಕಿಯರ ತಂಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾಗಬೇಕು ಎಂದು ಹೇಳಿದ ಅವರು ಶಾಲೆಯ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ತಂಡಕ್ಕೆ ಪೂರ್ವ ವಿದ್ಯಾರ್ಥಿ ಸಂಘದ ವತಿಯಿಂದ ಟಿ ಶರ್ಟ್ ಕೊಡುಗೆಯಾಗಿ ನೀಡಲಾಗುವುದು. ತಂಡಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಹೇಳಿದರು.

ಸಹಶಿಕ್ಷಕರಾದ ವಿಮಲ್‌ಕುಮಾರ್, ಶೀನಪ್ಪ ಎಸ್, ರವರು ಶುಭಹಾರೈಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಟಿ, ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕ ಆನಂದ ಅಜಿಲ ಸ್ವಾಗತಿಸಿದರು. ಶಿಕ್ಷಕಿ ಪ್ರಸನ್ನ ವಂದಿಸಿದರು. ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here