ರಾಮಕುಂಜ: ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಎ.10ರಂದು ಶ್ರೀ ರಾಮ ನವಮಿ ಉತ್ಸವದ ಅಂಗವಾಗಿ ಶ್ರೀ ರಾಮನಾಮ ತಾರಕ ಮಹಾಯಜ್ಞ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಬೆಳಿಗ್ಗೆ ಬೆಳಗ್ಗಿನ ಪೂಜೆಯ ನಂತರ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಶ್ರೀ ರಾಮನಾಮ ತಾರಕ ಮಹಾಯಜ್ಞ, ಶ್ರೀ ರಾಮ ದೇವರಿಗೆ ಪವಮಾನ ಸೂಕ್ತ ಕಲಶಾಭಿಷೇಕ, ಶ್ರೀರಾಮ ಜಪ ನಡೆಯಿತು. ಬಳಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಯಜ್ಞದ ಪೂರ್ಣಾಹುತಿ, ಶ್ರೀ ಸತ್ಯನಾರಾಯಣ ಪೂಜೆಯ ಮಂಗಳಾರತಿ, ಬಳಿಕ ಪ್ರಸಾದ ಭೋಜನ ನಡೆಯಿತು. ಪವಿತ್ರಪಾಣಿ ನರಹರಿ ಉಪಾಧ್ಯಾಯ, ಅರ್ಚಕ ಅನಂತ ಉಡುಪ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಸದಸ್ಯರಾದ ಯೋಗೀಶ ಕುಲಾಲ್ ಅಜ್ಜಿಕುಮೇರು, ಜನಾರ್ದನ ಗೌಡ ಬಾಂತೊಟ್ಟು, ಗಿರಿಯಪ್ಪ ಗೌಡ ಆನ, ಸಂಜೀವ ಶಾರದಾನಗರ, ಶೈಲಜಾ ಆಳ್ವ ಗುತ್ತು, ವಿಮಲಾ ಕರುಣಾಕರ ಆರಿಂಜ ಸೇರಿದಂತೆ ಉತ್ಸವ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.