ಪುತ್ತೂರು: ಎಪ್ರಿಲ್ 30ರಂದು ನಡೆಯಲಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವ ಮತ್ತು ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಎ.10ರಂದು ದೇವಳದಲ್ಲಿ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಸಹಿತ ಹಲವರು ಉಪಸ್ಥಿತರಿದ್ದರು.