ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಶಿಲಾನ್ಯಾಸ

0


ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ಶಿಲಾನ್ಯಾಸ ಕಾರ್ಯಕ್ರಮವು ಎ ೯ರಂದು ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಇವರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಮತ್ತು ಕಾಳಿಕಾಂಬಾ ದೇವಿ ದೇವಸ್ಥಾನದ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಗೌರವ ಸಲಹೆಗಾರರಾದ ಡಾ| ದೇವಿಪ್ರಸಾದ್ ಕಾನತ್ತೂರ್, ಗಣೇಶ್ ಉದನಡ್ಕ, ಸೀತಾರಾಮ ಗೌಡ ಮರಕ್ಕಡ, ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ, ಮೊಕ್ತೇಸರರಾದ ಜನಾರ್ದನ ಆಚಾರ್ಯ, ಕೃಷ್ಣ ಆಚಾರ್ಯ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷರಾದ ಪ್ರದೀಪ್ ಬೊಬ್ಬೆಕೇರಿ, ಹರೀಶ್ ಪೈಕ ಕಟೀಲ್, ಜತೆ ಕಾರ್ಯದರ್ಶಿ ಲಕ್ಷ್ಮಣ ಗೌಡ ಬೆದ್ರಂಗಳ, ಮೋಹನ್ ಕರಿಮಜಲು, ಕೋಶಾಧಿಕಾರಿ ಭವಿಷ್ ಕರಿಮಜಲು, ರಾಜೇಶ್ ಕರಿಮಜಲು, ಸಂಜೀವ ರೈ ಪೈಕ, ವಿಶ್ವನಾಥ ರೈ ಮಾಳ ಮತ್ತೀತತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here