ಪುತ್ತೂರು: ಕೋರ್ಟ್ ರಸ್ತೆಯಲ್ಲಿ ವ್ಯವಹರಿಸುತ್ತಿರುವ ಶಿವ ಜ್ಯುವೆಲ್ಲರ್ಸ್ ಮಾಲಕ ಶ್ರೀಧರ್ ಆಚಾರ್ಯ(ಮಾಮೇಶ್ವರ) ಸಾಮೆತ್ತಡ್ಕರವರ ಶ್ರದ್ಧಾಂಜಲಿ ಸಭೆಯು ಏ.10 ರಂದು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಸಾಮೆತ್ತಡ್ಕ ಸಿಝ್ಲರ್ ಸಾಪ್ಟ್ ಡ್ರಿಂಕ್ಸ್ ಮಾಲಕ ಪ್ರಸನ್ನ ಕುಮಾರ್ ಶೆಟ್ಟಿ, ಸತೀಶ್ ನಾಯಿಕ್ ಪರ್ಲಡ್ಕ,ಯುವ ಕಾಂಗ್ರೆಸ್ ಅಧ್ಯಕ್ಷ ಶಿವಪ್ರಸಾದ್ ಪಾಣಾಜೆ,ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಶೆಟ್ಟಿ,ಡಾ.ಮಂಜುನಾಥ್ ಶೆಟ್ಟಿ, ಮಾಜಿ ಪುರಸಭಾ ಸದಸ್ಯ ರಮೇಶ್ ರೈ ಮೊಟ್ಟೆತ್ತಡ್ಕ, ದಿನೇಶ್ ರೈ ಮೊಡಪ್ಪಾಡಿಮೂಲೆ, ಬಲ್ನಾಡು ಶ್ರೀ ಉಳ್ಳಾಲ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯಕಿರಣ್ ರೈ ಬಲ್ನಾಡು, ಅರಿಯಡ್ಕ ಗ್ರಾ.ಪಂ ಸದಸ್ಯ ದಿವ್ಯನಾಥ ಶೆಟ್ಟಿ ಕಾವು,ಆರ್ಯಾಪು ಗ್ರಾ.ಪಂ ಸದಸ್ಯ ನೇಮಾಕ್ಷ ಸುವರ್ಣ ಸಹಿತ ಹಲವರು ಆಗಮಿಸಿ ಮೃತ ಶ್ರೀಧರ್ ಆಚಾರ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಶ್ರದ್ದಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮೃತ ಶ್ರೀಧರ್ ಆಚಾರ್ಯರವರ ಪತ್ನಿ ಲತಾ ಶ್ರೀಧರ್ ಆಚಾರ್ಯ, ಪುತ್ರ ಅಭಿಷೇಕ್, ಪುತ್ರಿಯರಾದ ಅಕ್ಷತಾ, ಅನುಷಾರವರು ಉಪಸ್ಥಿತರಿದ್ದರು.