![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಬೆಳಂದೂರು ಸ.ಹಿ.ಪ್ರಾ.ಶಾಲೆಯಲ್ಲಿ ನೂತನ ಕೊಠಡಿಯ ಉದ್ಘಾಟನೆಯನ್ನು ನಿವೃತ್ತ ಮುಖ್ಯಗುರು ಟಿ.ಎಸ್ ಆಚಾರ್ ತುಂಬ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಗ್ರಾ.ಪಂ. ಸದಸ್ಯರಾದ ಮೋಹನ್ ಅಗಳಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಭವಾನಿ ಶಂಕರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಮರಕ್ಕಡ, ನಿವೃತ್ತ ಮುಖ್ಯಗುರು ಸೋಮಪ್ಪ ಗೌಡ ಹಾಗೂ ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜಾನಕಿ ಸ್ವಾಗತಿಸಿ, ವಂದಿಸಿದರು. ಬಳಿಕ ಸಮುದಾಯದತ್ತ ಕಾರ್ಯಕ್ರಮ ನಡೆಯಿತು.