ಪುಣಚ: ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವು ಎ.ರಿಂದ ಎ.11ರವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮಗಳೊಂದಿಗೆ ನಡೆಯಿತು. ಎ.7ರಂದು ಬೆಳಿಗ್ಗೆ ಗಣಪತಿ ಹೋಮ, ಧ್ವಜಾರೋಹಣ, ನಿತ್ಯ ಬಲಿ, ರಾತ್ರಿ ಉತ್ಸವ ಬಲಿ ನಡೆದು,
ಎ.8 ಮತ್ತು 9ರಂದು ಬೆಳಿಗ್ಗೆ ದೀಪ ಬಲಿ, ದರ್ಶನ ಬಲಿ, ರಾತ್ರಿ ಉತ್ಸವ ಬಲಿ, ಕೆರೆಕಟ್ಟೆ ಉತ್ಸವ ನಡೆದು, ಎ೧೦ರಂದು ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗಪೇಟೆ ಸವಾರಿ, ನಿತ್ಯಪೂಜೆ, ಶ್ರೀ ಭೂತ ಬಲಿ, ಶಯನ.
ಎ.11ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತೀರ್ಥಪ್ರಸಾದ ವಿತರಣೆ, ತುಲಾ ಭಾರ ಸೇವೆ, ರಾತ್ರಿ ಪಡುಬೇಟೆ ಸವಾರಿ, ಅವಭೃತ ಸ್ನಾನ, ಬಟ್ಟಲು ಕಾಣಿಕೆ, ಧ್ವಜಾವರೋಹಣದೊಂದಿಗೆ ಸಂಪನ್ನಗೊಂಡಿತು. ಬಳಿಕ ನೆತ್ತರ್ಕಣ, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಿತು.
ಪ್ರತಿ ದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.