ವಿಟ್ಲ: ಮರಕ್ಕೆ ನೇಣು ಬಿಗಿದು ವ್ಯಕ್ತಿ  ಆತ್ಮಹತ್ಯೆ

0

 


ವಿಟ್ಲ:  ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65 ವ.)ರವರು ಮೃತ ದುರ್ದೈವಿ. ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದವರು ಬೆಳಗ್ಗೆ ಮನೆಯ ಹೊರಗಿನ ಮರಕ್ಕೆ ನೇಣುಬಿಗಿದುಕೊಂಡಿದ್ದರು.  ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ  ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here