ಪುತ್ತೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 5ನೇ ವಾರ್ಷಿಕ ಸಮಾರಂಭವು ಎ.14ರಂದು ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿನ ಶ್ರೀ ಪಾರ್ವತಿ ಸಾಂಸ್ಕೃತಿಕ ಕಲಾ ವೇದಿಕೆಯಲ್ಲಿ ನಡೆಯಲಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ನ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಸಮಾರಂಭ ಉದ್ಘಾಟಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೋಣಾಲು ಜೈರಾಜ್ ಭಂಡಾರಿ, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸ್ವಣೋದ್ಯಮಿ ಬಲರಾಮ ಆಚಾರ್ಯ, ಉದ್ಯಮಿ ದೇರ್ಲ ಕರುಣಾಕರ ರೈ, ಯಕ್ಷಧ್ರುವ ಪಟ್ಲ ಫೌಂಡೇಶನ್ನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾ ಪೋಷಿತ ಯಕ್ಷಗಾನ ಮಂಡಳಿಯ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಪ್ರೊ| ಅಮೃತ ಸೋಮೇಶ್ವರ ವಿರಚಿತ ’ ಕಾಯಕಲ್ಪ’ ಎಂಬ ಪೌರಾಣಿಕ ಪುಣ್ಯ ಕಥಾನಕ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.