ಶಿರಾಡಿ ಘಾಟಿಯಲ್ಲಿ ಕಾಣಿಸಿಕೊಂಡ ಒಂಟಿಸಲಗ ಪಾದಚಾರಿ ಮೇಲೆ ದಾಳಿ

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ಕಂಡುಬಂದಿದ್ದು ಪಾದಚಾರಿಯೊಬ್ಬರನ್ನು ಗಾಯಗೊಳಿಸಿದೆ ಎಂದು ವರದಿಯಾಗಿದೆ.

 

ಎ.13ರಂದು ಬೆಳಿಗ್ಗೆ ಶಿರಾಡಿ ಘಾಟಿಯಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಪಾದಚಾರಿಯೊಬ್ಬರನ್ನು ಸೊಂಡಿಲಿನಿಂದ ಎತ್ತಿ ಬಿಸಾಕಿದೆ ಎಂದು ವರದಿಯಾಗಿದೆ. ಗಾಯಾಳುವನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆ ಹೆದ್ದಾರಿಯಲ್ಲಿಯೇ ಓಡಾಟ ನಡೆಸಿದ್ದರಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಸಹ ಆಗಿತ್ತು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here