- ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ; ಪ್ರ.ಕಾರ್ಯದರ್ಶಿ ಸುಲೈಮಾನ್ ಪುನರಾಯ್ಕೆ
ಪುತ್ತೂರು: ಸಾರ್ಯ ಅಲ್ ಅಮಲ್ ಜಮಾಅತ್ ಕಮಿಟಿ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ದೊಡ್ಡಡ್ಕ ಪುನರಾಯ್ಕೆಗೊಂಡಿದ್ದಾರೆ.
ಮಹಮೂದುಲ್ ಫೈಝಿ ಓಲೆಮುಂಡೋವು ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಮಹಮೂದುಲ್ ಫೈಝಿ ಓಲೆಮುಂಡೋವು, ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಪಾಂಡಿಲ್ತಡ್ಕ, ಸುಲೈಮಾನ್.ಪಿ, ಕಾರ್ಯದರ್ಶಿಯಾಗಿ ಶರೀಫ್ ಗಾಣದಮೂಲೆ, ಕೋಶಾಧಿಕಾರಿಯಾಗಿ ಅಬ್ದುಲ್ಲ ಕುಂಞಿ ಭಂಡಶಾಲೆ ಆಯ್ಕೆಯಾದರು. ಸಲಹೆಗಾರರಾಗಿ ಅಬ್ದುರ್ರಹ್ಮಾನ್ ಹಾಜಿ ಭಂಡಶಾಲೆ, ಮುಹಮ್ಮದ್ ಹಾಜಿ ಕೋಡಿಯಡ್ಕರವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ಲ ಟಿ, ಅಬ್ದುಲ್ಲ ಡಿ, ಅಬ್ದುಲ್ಲ ಸುರುಳಿಮಜಲುರವರನ್ನು ಆಯ್ಕೆ ಮಾಡಲಾಯಿತು.