ಆಲಂತಾಯ: ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

0


ನೆಲ್ಯಾಡಿ: ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ರವರ ಜಯಂತಿಯನ್ನು ಕಡಬ ತಾಲೂಕಿನ ಆಲಂತಾಯ ಗ್ರಾಮದ ಪುಲಾರ ಎಂಬಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ನಂತರ ಸಾರ್ವಜನಿಕ ಬಸ್ಸು ತಂಗುದಾಣ ಹಾಗೂ ಅದರ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ನಿವೃತ್ತ ಮುಖ್ಯೊಪಾಧ್ಯಾಯಿನಿ ಸುಗಂಧಿಯವರು ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತೇಜಸ್ವಿನಿ ಶೇಖರ ಗೌಡ ಕಟ್ಟಪುಣಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಪ್ರೀತ್, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಗೌಡ ಪಠೇರಿ, ಉಪಾಧ್ಯಕ್ಷೆ ಶೋಭಲತಾ, ಸದಸ್ಯರಾದ ಸವಿತಾ ಪುಲಾರ, ಸ್ಥಳೀಯರಾದ ಸುಶೀಲ, ರತ್ನಾವತಿ, ಧರ್ಣಮ್ಮ, ವಾರಿಜ, ಲತಾ, ಜಯಂತಿ, ಗಣೇಶ್ ಬೊಟ್ಟಿಮಜಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here