ತಿಂಗಳಾಡಿ: ಬಿಜೆಪಿ ಯುವ ಮೋರ್ಚಾ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಕ್ತದಾನ ಶಿಬಿರ

0

ಪುತ್ತೂರು: ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ, ಬಿಜೆಪಿ ಯುವ ಮೋರ್ಚಾ ನರಿಮೊಗರು ಮಹಾಶಕ್ತಿ ಕೇಂದ್ರ, ಬಿಜೆಪಿ ಕೆದಂಬಾಡಿ ಶಕ್ತಿ ಕೇಂದ್ರದ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ಶ್ರೀ ಶಿರಾಡಿ ಭಕ್ತ ವೃಂದ ಇದ್ಪಾಡಿ, ಯುವರಂಗ (ರಿ.) ಕೆದಂಬಾಡಿ ಇದರ ಸಹಕಾರದೊಂದಿಗೆ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ರಕ್ತದಾನ ಶಿಬಿರವು ಎ. 14 ರಂದು ಕೆದಂಬಾಡಿ ಪಂಚಾಯತ್ ಸಭಾಂಗಣ (ತಿಂಗಳಾಡಿ) ಯಲ್ಲಿ ಜರುಗಿತು.

ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇದರ ಮೆಡಿಕಲ್ ಆಫೀಸರ್ ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನೆರೆದವರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.

 

ವೇದಿಕೆಯಲ್ಲಿದ್ದ ಕೆದಂಬಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪ್ರ. ಕಾರ್ಯದರ್ಶಿಯಾದ ರತನ್ ರೈ ಕುಂಬ್ರ ಹಾಗೂ ಟಿ.ಎ.ಪಿ.ಎಂ.ಸಿ ಪುತ್ತೂರು ಇದರ ಅಧ್ಯಕ್ಷ  ಕೃಷ್ಣಕುಮಾರ್ ರೈ ಕೆದಂಬಾಡಿ ಗುತ್ತು ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು, ಬಿಜೆಪಿ ಯುವ ಮೋರ್ಚಾ ನರಿಮೊಗರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಚಿನ್ ಶೆಟ್ಟಿ ಪಟ್ಟೆ, ಬಿಜೆಪಿ ಕೆದಂಬಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಪೂಜಾರಿ ಗುರಿಕ್ಕಾರ, ಶ್ರೀ ಶಿರಾಡಿ ಭಕ್ತ ವೃಂದ ಇದ್ಪಾಡಿ ಇದರ ಸಂಚಾಲಕ ರಾಧಾಕೃಷ್ಣ ಪೂಜಾರಿ, ಯುವರಂಗ (ರಿ.) ಕೆದಂಬಾಡಿ ಇದರ ಸಂಚಾಲಕ ಕೃಷ್ಣಕುಮಾರ್ ಇದ್ಯಾಪೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪ್ರ. ಕಾರ್ಯದರ್ಶಿ ಶ್ರೀಕಾಂತ್ ಕಾವು, ಬಿಜೆಪಿ ಯುವ ಮೋರ್ಚಾ ನರಿಮೊಗರು ಮಹಾಶಕ್ತಿ ಕೇಂದ್ರದ ಪ್ರಭಾರಿ ಶಿಶಿರ್ ಪೆರ್ವೋಡಿ, ಯುವ ಮೋರ್ಚಾ ತಾಲೂಕು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಯುವ ಮೋರ್ಚಾ ಬೂತ್ ಸಂಚಾಲಕ್, ಸಹ ಸಂಚಾಲಕ್, ಅದೇ ರೀತಿ ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು, ಕಾರ್ಯಕರ್ತರು, ಸಂಘ ಸಂಸ್ಥೆಯ ಪ್ರಮುಖರು ಪಾಲ್ಗೊಂಡಿದ್ದರು.ರಕ್ತದಾನ ಶಿಬಿರದಲ್ಲಿ ಸುಮಾರು 25 ಮಂದಿಯಿಂದ ರಕ್ತದಾನ ಮಾಡಲಾಯಿತು.

ಬಿಜೆಪಿ ಯುವ ಮೋರ್ಚಾ ನರಿಮೊಗರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಚಿನ್ ಶೆಟ್ಟಿ ಪಟ್ಟೆ ಸ್ವಾಗತಿಸಿ, ಪ್ರ. ಕಾರ್ಯದರ್ಶಿ ಮಂಜುನಾಥ್ ದುಗ್ಗಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here