ಪುತ್ತೂರು: ಈಶ್ವರಮಂಗಲ, ಕರ್ನೂರು ಹಾಗೂ ಪಡುವನ್ನೂರು ಭಾಗಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಪ್ರಶಿಕ್ಷಣಾರ್ಥಿ, ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾರವರ ನೇತೃತ್ವದಲ್ಲಿ ನಡೆಯಿತು.
ಪ್ರಾಥಮಿಕ ಅರೋಗ್ಯ ಕೇಂದ್ರ. ಈಶ್ವರಮಂಗಲ ವ್ಯಾಪ್ತಿಯ ಅಂಗನವಾಡಿ ಕೇಂದ್ರ, ಶಾಲೆ, ಸ್ತ್ರೀಶಕ್ತಿ ಗುಂಪು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಕಡೆ ಗರ್ಭಕಂಠದ ಕ್ಯಾನ್ಸರ್ ಕುರಿತು ಮಾಹಿತಿ ನೀಡಿ ಆರೋಗ್ಯ ಅರಿವು ಕಾರ್ಯಕ್ರಮ ನಡೆಸಲಾಯಿತು. ಈಶ್ವರಮಂಗಲ ಆರೋಗ್ಯ ಕೇಂದ್ರದ ವೈಧಾಧಿಕಾರಿ ಡಾ .ನಿಖಿಲ್ ಮತ್ತು ಸಿಬ್ಬಂದಿ ಮತ್ತು ಆಶಾ ,ಅಂಗನವಾಡಿ ಮತ್ತು ಪಂಚಾಯತ್ ಸಹಕಾರದೊಂದಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.