ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಹನುಮ ಜಯಂತಿ ಆಚರಣೆ

0

ಈಶ್ವರಮಂಗಲ: ಪಂಚಮುಖಿ ಶ್ರೀ ಆಂಜನೇಯ ಕ್ಷೇತ್ರ ಹನುಮಗಿರಿಯಲ್ಲಿ ಏ.16 ರಂದು ಹನುಮ ಜಯಂತಿಯ ಪ್ರಯುಕ್ತ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ವೈಧಿಕ ವಿಧಿ ವಿಧಾನಗಳು ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಂ ಪಿ, ಶಿವರಾಮ ಶರ್ಮ, ನಾಗರಾಜ್ ನಡುವಡ್ಕ, ನಾಗಪ್ಪ ಮಾಸ್ತರ್ ಬೊಮ್ಮೆಟ್ಟಿ ಹಾಗೂ ಹಲವಾರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here