ಆಲಂಕಾರು: ಆಲಂಕಾರು ಮತ್ತು ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಡೋ ಪೀಡಿತರ ಆರೋಗ್ಯ ತಪಾಸಣಾ ಶಿಬಿರ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರುಗಳ ನೇತೃತ್ವದಲ್ಲಿ ಎ.19ರಂದು ಆಲಂಕಾರು ಗ್ರಾಮ ಪಂಚಾಯತ್ನಲ್ಲಿ ನಡೆಯಿತು.
ಆಲಂಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಶೆಟ್ಟಿಯವರು ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಜೆಸಿಐನ ಅಜಿತ್ ಕುಮಾರ್ ರೈಯವರು ಅಧ್ಯಕ್ಷತೆ ವಹಿಸಿದ್ದರು. ಆಲಂಕಾರು ಗ್ರಾ.ಪಂ.ಅಧ್ಯಕ್ಷ ಸದಾನಂದ ಆಚಾರ್ಯ, ಕಾರ್ಯದರ್ಶಿ ವಸಂತ ಶೆಟ್ಟಿ, ಆಲಂಕಾರು ಜೆಸಿಐನ ಸದಸ್ಯರುಗಳಾದ ಮಮತ ಪಟ್ಟೆ, ಶ್ರದ್ದಾ ಗುರುಕಿರಣ್, ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಆಕಾಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿಗಳಾದ ಲೀಲಾವತಿ, ಮೋಹನಾಂಗಿ, ಪೆರಾಬೆ ಗ್ರಾ.ಪಂ.ಸದಸ್ಯ ಫಯಾಜ್ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅರ್ಹ ಎಂಡೋಪೀಡಿತರಿಗೆ ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಆಲಂಕಾರು ಜೆಸಿಐನ ಪೂರ್ವಾಧ್ಯಕ್ಷ ಪ್ರದೀಪ್ ಬಾಕಿಲ ಸ್ವಾಗತಿಸಿದರು. ಸರೋಜಿನಿ ಕಾರ್ಯಕ್ರಮ ನಿರೂಪಿಸಿದರು. ಆಲಂಕಾರು ಮತ್ತು ಪೆರಾಬೆ ಗ್ರಾಮದ ಆಶಾ ಕಾರ್ಯಕರ್ತೆಯರು ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಎಂಡೋ ಫಲಾನುಭವಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ಕಡಬ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಅಕ್ಷತಾ ಎ., ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಆಲಂಕಾರು ಗ್ರಾಮ ಪಂಚಾಯತ್ನ ಮೋನಪ್ಪ ಬಿ., ಪೆರಾಬೆ ಗ್ರಾಮ ಪಂಚಾಯತ್ನ ಮುತ್ತಪ್ಪ ಬಿ., ರವರು ಸಹಕರಿಸಿದರು.