ಮಾಣಿ: ಕಾರು – ಲಾರಿ ನಡುವೆ ಅಪಘಾತ – ವಾಹನ ಸಂಚಾರ ಅಸ್ತವ್ಯಸ್ತ

0

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ  ಅಸ್ತವ್ಯಸ್ತಗೊಂಡಿದೆ.

 


ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ‌ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಆದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನಗಳು ರಸ್ತೆಯಲ್ಲಿ ನಿಂತ ಪರಿಣಾಮ ಕೆಲ ಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಬಂದು ವಾಹನಗಳನ್ನು ತೆರವುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here