ಫಿಲೋಮಿನಾ ಎಂ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿಭಾಗ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಆಶ್ರಯದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಏ 7 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ನೋಡೆಲ್ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ರಾಜಗೋಪಾಲ್ ರವರು ಸ್ವಚ್ಛತೆಯ ಬಗೆಗಿನ ಕೆಲವು ಮಾಹಿತಿಗಳನ್ನು ವಿಸ್ತಾರವಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಸದಸ್ಯರು, ಕಾರ್ಯದರ್ಶಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಪಾಲ್ಗೊಂಡರು. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರಿಯ ಬಿ, ದ್ವಿತಿ ಬಿ, ಕೃಷ್ಣ ಪ್ರಸಾದ್ ಹಾಗೂ ಶ್ರೀಜಿತ್ ಕೆಎಂ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here