ಮಂಗಳೂರು: ಸರ್ಕಾರದ ಅನಿಯಂತ್ರಿತ ಬೆಲೆ ಏರಿಕೆಯ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ (WIಒ) ಸುಳ್ಯ ವಿಧಾನ ಸಭಾ ಕ್ಷೇತ್ರದ ವತಿಯಿಂದಅಂಕತ್ತಡ್ಕ ಜಂಕ್ಷನ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಅಣಕು ಪ್ರದರ್ಶನದ ಮೂಲಕ ಪ್ರತಿಭಟನಾ ಸಭೆಯನ್ನು ಆರಂಭಿಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಯಿಂದ ಹಾಗೂ ಅನಿಯಂತ್ರಿತ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಬದುಕಲು ಕಷ್ಟವಾಗಿದೆ ಈ ಸರಕಾರವನ್ನು ದೇಶದಿಂದ ನಿರ್ಮೂಲನೆ ಮಾಡಬೇಕು ಎಂದರು. ಸುಳ್ಯ ವಿಧಾನಸಭಾ ಕ್ಷೇತ್ರಾಧ್ಯಕ್ಷೆ ಸಬೀನಾ ಅಂಕತ್ತಡ್ಕ ಸ್ವಾಗತಿಸಿ, ಕಾರ್ಯದರ್ಶಿ ಅನ್ಶಿಫಾ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಸಮಿತಿ ಸದಸ್ಯರಾದ ಸಮೀನಾ ಬೆಳ್ಳಾರೆ, ಮಿಸ್ರಿಯಾ ಅಂಕತಡ್ಕ ಮತ್ತಿತರರು ಉಪಸ್ಥಿತರಿದ್ದರು.