ಕಾಣಿಯೂರು: ಕಾಯಿಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಎ.29, 30ರಂದು ನಡೆಯಲಿದ್ದು, ಆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಎ.21ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಉದಯ ರೈ ಮಾದೋಡಿ, ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ಅರ್ಚಕ ರಾಮಕೃಷ್ಣ ಪಿ.ಎಸ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಹರೀಶ್ ಮುಂಡಾಳ, ರಾಧಾಕೃಷ್ಣ ಬೈತಡ್ಕ, ಬೆಳಂದೂರು ಗ್ರಾ.ಪಂ. ಸದಸ್ಯ ಮೋಹನ್ ಅಗಳಿ, ಲಿಂಗಪ್ಪ ಗೌಡ ಅಗಳಿ ಬಾಲಕೃಷ್ಣ ಗೌಡ ಅಗಳಿ ಮತ್ತೀತರರು ಉಪಸ್ಥಿತರಿದ್ದರು.