ಅಂಬಿಕಾದಲ್ಲಿ ಸೇತುಬಂಧ ತರಗತಿ ಪ್ರಾರಂಭ

0

 

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ ಪ್ರಥಮ ಪಿ.ಯು.ಸಿ.ಯಿಂದ ದ್ವಿತೀಯ ಪಿ.ಯು.ಸಿ.ಗೆ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ದಿನಗಳಲ್ಲಿ ನಡೆಸಲ್ಪಡುವ ಸೇತುಬಂಧ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ.ಶ್ರುತಕೀರ್ತಿರಾಜ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾಹಿತಿ ನೀಡಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್‌ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ ಶುಭ ಹಾರೈಸಿದರು. ವಿದ್ಯಾರ್ಥಿನಿಯರಾದ ವಿಧಾತ್ರಿ, ವೈಷ್ಣವಿ, ಅನಘ, ಶರಧಿ ಪ್ರಾರ್ಥಿಸಿದರು. ಉಪನ್ಯಾಸಕಿ ರಮ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here