ಪುತ್ತೂರು: ಮಂಗಳೂರು ಕೆ.ಎಂ.ಎಫ್ನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜರವರಿಗೆ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ಎ.24 ರಂದು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ನಡೆಯಿತು. ಜಯರಾಮ ರೈಯವರು ಕಳೆದ 36 ವರ್ಷಗಳಿಂದ ಸಂಘದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲು, ಹಾರ ಹಾಕಿ, ಪೇಟಾ ತೊಡಿಸಿ ಫಲಪುಷ್ಪ, ಸ್ಮರಣಿಕೆ ಕೊಟ್ಟು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಲ, ಉಪಾಧ್ಯಕ್ಷ ಶಿವರಾಮ ಗೌಡ ಇದ್ಯಪೆ, ನಿರ್ದೇಶಕರುಗಳಾದ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಭಾಸ್ಕರ ಬಲ್ಲಾಳ್ ಕೆದಂಬಾಡಿಬೀಡು, ಲೀಲಾವತಿ ರೈ ಕೋಡಂಬು, ವೀರಪ್ಪ ನಾಯ್ಕ ಪಟ್ಟೆತ್ತಡ್ಕ, ಸೂರ್ಯಪ್ರಸನ್ನ ರೈ ಎಂಡೆಸಾಗು, ಶಿವರಾಮ ರೈ ಕಜೆ, ತಾರನಾಥ ಕಂಪ, ನಿಮಿತಾ ರೈ ಕೆರೆಮೂಲೆ, ಬಾಬು ಕೋರಂಗ, ಡಿಸಿಸಿ ಬ್ಯಾಂಕ್ನ ವಲಯ ಮೇಲ್ವಿಚಾರಕ ಶರತ್ ಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.