- ವಿಭಾಗವಾರು ನೇಮಕಾತಿ ಹುದ್ದೆ – ಸಚಿವ ಅಂಗಾರ ಎಸ್ ಭರವಸೆ
ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ಮತ್ತು ಕೆ.ಎಸ್. ಆರ್.ಟಿ.ಸಿ ಎಸ್ಸಿ, ಎಸ್ಟಿ ನೌಕರರ ಸಂಘ ಪುತ್ತೂರು ವಿಭಾಗದ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ | ಬಿ.ಆರ್ ಅಂಬೇಡ್ಕರ್ ಅವರ ೧೩೧ ನೇ ಜನ್ಮ ದಿನಾಚರಣಾ ಕಾರ್ಯಕ್ರಮ ಎ.೨೩ ರಂದು ಕೆಎಸ್ಆರ್ ಟಿ ಸಿ ಪುತ್ತೂರು ವಿಭಾಗೀಯ ಘಟಕದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಬಂದರು ಮತ್ತು ಮೀನುಗಾರಿಕೆ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಅಂಗಾರ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಡಾ| ಬಿ.ಆರ್ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಕೆಎಸ್ ಅರ್ ಟಿ ಸಿ ಹುದ್ದೆ ನೇಮಕಾತಿ ವಿಚಾರಕ್ಕೆ ಸಂಬಂದಿಸಿ ಸಿಬ್ಬಂದಿಗಳ ಕೊರತೆ ನೀಗಿಸಲು ವಿಭಾಗವಾರು ನೇಮಕಾತಿ ಮಾಡುವ ಕುರಿತು ಸಿಬಂದಿಗಳ ಮನವಿಗೆ ಸ್ಪಂಧಿಸಿ ಮಾತನಾಡಿದರು.
ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಕರ್ನಾಟಕ ಸರ್ಕಾರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಭಾಸ್ಕರ್ ಅಂಬೇಡ್ಕರ್ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ಪ.ಜಾ ಮತ್ತು ಪ.ಪಂಗಡಗಳ ನೌಕರರ ಸಂಘದ ಗೌರವ ಅಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು, ರಾಜ್ಯ ಸಂಘಟನೆ ಕಾರ್ಯದರ್ಶಿ ಶ್ರೀನಿವಾಸ, ಪುತ್ತೂರು ವಿಭಾಗದ ಅಧ್ಯಕ್ಷ ಸಿ.ಎಸ್.ಕುಮಾರಸ್ವಾಮಿ, ಭದ್ರತಾ, ಜಾಗೃತ ಅಧಿಕಾರಿ ರಮೇಶ್ ಬಾಬು, ವಿಭಾಗೀಯ ಸಂಚಲನಾಧಿಕಾರಿ ಮುರಳಿಧರ, ವಿಭಾಗೀಯ ತಾಂತ್ರಿಕ ಶಿಲ್ಪಿ ಆಶಾಲತಾ, ಅಂಕಿಅಂಶ ಅಧಿಕಾರಿ ಹರೀಶ್ ಕೊಟ್ಟಾರಿ, ಕಾರ್ಮಿಕ ಕಲ್ಯಾಣಾಧಿಕಾರಿ , ಸಹಾಯಕ ಆಡಳಿತಾಧಿಕಾರಿ ರೇವತಿ, ಲಾ ಅಧಿಕಾರಿ ಸೌಮ್ಯ, ಅಕೌಂಟ್ ಅಧಿಕಾರಿ ಲತಾ, ಪುತ್ತೂರು ಘಟಕದ ಇಸ್ಮಾಯಲ್, ದಲಿತ ಸೇವಾ ಸಮಿತಿಯ ಅಧ್ಯಕ್ಷ ಬಿ.ಕೆ ಅಣ್ಣಪ್ಪ ಕಾರೆಕ್ಕಾಡು, ವಿಟ್ಲದ ಚಂದ್ರಶೇಖರ್, ಲೋಕೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.